ರಾಜ್ಯ

ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, ಆಸ್ಪತ್ರೆಯ ಕ್ರಾಂತಿಕಾರಿ ತುರ್ತು ಚಿಕಿತ್ಸಾ ಯೋಜನೆ ‘ME Care’ (ಮಿ ಕೇರ್) ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ವೈದ್ಯ ವೃತ್ತಿಯಲ್ಲಿ ನಿಸ್ವಾರ್ಥ ಮನೋಭಾವ ಇರಬೇಕು. ಈ ಕೆಲಸದಲ್ಲಿ ಸಾಕಷ್ಟು ಸವಾಲುಗಳು ಇರುತ್ತವೆ. ಇದನ್ನು ಮೀರಿ ನಡೆಯಬೇಕು. ಈಗ ತಂತ್ರಜ್ಞಾನವೂ ಮುಂದುವರೆದು ನಿಮ್ಮ ನೆರವಿಗಿದೆ. ಇದರಿಂದ ಸಾಕಷ್ಟು ಉಪಯೋಗವಾಗಿದೆ,” ಎಂದರು.

ಗ್ರಾಮೀಣ ಮತ್ತು ನಗರ ಭಾಗದ ವೈದ್ಯಕೀಯ ಸೇವೆಯ ಕುರಿತು ಮಾತನಾಡಿದ ಡಿಸಿಎಂ, “ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಣೆ ಮಾಡಿದ ವೈದ್ಯರಿಗೆ ನಗರ ಭಾಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಸುಲಭ. ನಗರ ಭಾಗದಲ್ಲಿ ಹಿರಿಯ ವೈದ್ಯರ ಸಲಹೆ ಪಡೆದು ಕಿರಿಯ ವೈದ್ಯರು ಕೆಲಸ ಮಾಡಬೇಕಾಗುತ್ತದೆ. ನಾನು ಸ್ವಲ್ಪ ದಿನ ವೈದ್ಯಕೀಯ ಶಿಕ್ಷಣ ಸಚಿವನಾಗಿ ಕೆಲಸ ಮಾಡಿದ ಕಾರಣಕ್ಕೆ ಇದರ ಬಗ್ಗೆ ಅರಿವಿದೆ. ನನ್ನ ಮನೆಯಲ್ಲೇ ಅರ್ಧ ಡಜನ್ ವೈದ್ಯರಿದ್ದಾರೆ,” ಎಂದು ಸ್ಮರಿಸಿದರು.

ಕೈಗೆಟುಕುವ ದರದಲ್ಲಿ ಚಿಕಿತ್ಸೆ: ಡಿಸಿಎಂ ಮೆಚ್ಚುಗೆ
“ಡಾ. ವಿಕ್ರಮ್ ಅವರು ದೂರದ ಗುಲ್ಬರ್ಗದಿಂದ ಬಂದು ಇಲ್ಲಿ ಸೇವೆ ಸಲ್ಲಿಸಿ ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ದಿನಕ್ಕೆ ಕೇವಲ 10 ರೂಪಾಯಿ ನೀಡಿದರೆ 1 ಕೋಟಿವರೆಗೆ ಆರೋಗ್ಯ ವಿಮೆ ನೀಡುವುದಾಗಿ ಹೇಳಿದ್ದಾರೆ. ಖಾಸಗಿ ವಲಯವು ಸರ್ಕಾರದೊಂದಿಗೆ ಕೈಜೋಡಿಸಿ ಕಡಿಮೆ ವೆಚ್ಚದಲ್ಲಿ ಉತ್ತಮ ಆರೋಗ್ಯ ಸೇವೆ ನೀಡುವಂತಾಗಲಿ. ವಿಕ್ರಮ್ ಅವರ ತಂಡದ ಈ ಹೊಸ ಸಾಹಸಕ್ಕೆ ಶುಭವಾಗಲಿ,” ಎಂದು ಹಾರೈಸಿದರು.
“ಯುನೈಟೆಡ್ ಎಂದರೆ ಕನ್ನಡದಲ್ಲಿ ಒಗ್ಗಟ್ಟು. ಈ ಒಗ್ಗಟ್ಟು ಜನರ ಆರೋಗ್ಯ ರಕ್ಷಣೆ ಮಾಡಲಿ. ‘ಶುಭಂ ಕರೋತಿ ಕಲ್ಯಾಣಂ, ಆರೋಗ್ಯ ಧನಸಂಪದಂ…’ ಎಂಬ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಮಂಗಳವಾಗಲಿ,” ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ:-ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಕಾರ್ಯಕ್ರಮದಲ್ಲಿ ಮಾತನಾಡಿದ ಯುನೈಟೆಡ್ ಆಸ್ಪತ್ರೆಗಳ ಅಧ್ಯಕ್ಷರಾದ ಡಾ. ವಿಕ್ರಮ್ ಸಿದ್ದರೆಡ್ಡಿ, “ನಮ್ಮ ಆಹ್ವಾನವನ್ನು ಮನ್ನಿಸಿ ಆಗಮಿಸಿದ ಉಪಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಕೇವಲ 4 ವರ್ಷಗಳ ಅವಧಿಯಲ್ಲಿ ಯುನೈಟೆಡ್ ಆಸ್ಪತ್ರೆ ಜನರ ವಿಶ್ವಾಸಗಳಿಸಿದೆ. ‘ME Care’ ಯೋಜನೆಯು ಆವಿಷ್ಕಾರ, ಕೈಗೆಟುಕುವ ದರ ಮತ್ತು ಸಹಾನುಭೂತಿಯನ್ನು ಸಂಯೋಜಿಸುವ ನಮ್ಮ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ,” ಎಂದರು.
“ತುರ್ತು ಸಂದರ್ಭಗಳಲ್ಲಿ ಕುಟುಂಬಗಳ ಮೇಲಾಗುವ ಆರ್ಥಿಕ ಹೊರೆಯನ್ನು ಸಂಪೂರ್ಣವಾಗಿ ತಗ್ಗಿಸುವುದು ಮತ್ತು ಅತ್ಯುನ್ನತ ಗುಣಮಟ್ಟದ ಚಿಕಿತ್ಸೆ ನೀಡುವುದು ನಮ್ಮ ಗುರಿ. ಬೆಂಗಳೂರು ಮತ್ತು ಕಲಬುರಗಿಯಲ್ಲಿ ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಆರೋಗ್ಯ ಸೇವೆ ನೀಡುವಲ್ಲಿ ಯುನೈಟೆಡ್ ಆಸ್ಪತ್ರೆ ಸದಾ ಮುಂದಿರುತ್ತದೆ,” ಎಂದು ಅವರು ತಿಳಿಸಿದರು.

ಏನಿದು ‘ME Care’ ಯೋಜನೆ?
ಇದು ಒಂದು ವಿಶಿಷ್ಟ ತುರ್ತು ಆರೋಗ್ಯ ಯೋಜನೆಯಾಗಿದ್ದು, ದಿನಕ್ಕೆ ಕೇವಲ 10 ರೂ. (ವರ್ಷಕ್ಕೆ 3558 ರೂ.) ವೆಚ್ಚದಲ್ಲಿ 1 ಕೋಟಿ ರೂ.ವರೆಗಿನ ತುರ್ತು ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ. ಇದು ಜಯನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಸಂಪೂರ್ಣ ನಗದು ರಹಿತ (Cashless) ಮತ್ತು ಯಾವುದೇ ಗುಪ್ತ ಶುಲ್ಕಗಳಿಲ್ಲದ ಪಾರದರ್ಶಕ ಯೋಜನೆಯಾಗಿದೆ.
ಕಾರ್ಯಕ್ರಮದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್, ಆಸ್ಪತ್ರೆಯ ಹಿರಿಯ ವೈದ್ಯರು, ಸಿಬ್ಬಂದಿ ವರ್ಗ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago