ರಾಜ್ಯ

ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, ಆಸ್ಪತ್ರೆಯ ಕ್ರಾಂತಿಕಾರಿ ತುರ್ತು ಚಿಕಿತ್ಸಾ ಯೋಜನೆ ‘ME Care’ (ಮಿ ಕೇರ್) ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ವೈದ್ಯ ವೃತ್ತಿಯಲ್ಲಿ ನಿಸ್ವಾರ್ಥ ಮನೋಭಾವ ಇರಬೇಕು. ಈ ಕೆಲಸದಲ್ಲಿ ಸಾಕಷ್ಟು ಸವಾಲುಗಳು ಇರುತ್ತವೆ. ಇದನ್ನು ಮೀರಿ ನಡೆಯಬೇಕು. ಈಗ ತಂತ್ರಜ್ಞಾನವೂ ಮುಂದುವರೆದು ನಿಮ್ಮ ನೆರವಿಗಿದೆ. ಇದರಿಂದ ಸಾಕಷ್ಟು ಉಪಯೋಗವಾಗಿದೆ,” ಎಂದರು.

ಗ್ರಾಮೀಣ ಮತ್ತು ನಗರ ಭಾಗದ ವೈದ್ಯಕೀಯ ಸೇವೆಯ ಕುರಿತು ಮಾತನಾಡಿದ ಡಿಸಿಎಂ, “ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಣೆ ಮಾಡಿದ ವೈದ್ಯರಿಗೆ ನಗರ ಭಾಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಸುಲಭ. ನಗರ ಭಾಗದಲ್ಲಿ ಹಿರಿಯ ವೈದ್ಯರ ಸಲಹೆ ಪಡೆದು ಕಿರಿಯ ವೈದ್ಯರು ಕೆಲಸ ಮಾಡಬೇಕಾಗುತ್ತದೆ. ನಾನು ಸ್ವಲ್ಪ ದಿನ ವೈದ್ಯಕೀಯ ಶಿಕ್ಷಣ ಸಚಿವನಾಗಿ ಕೆಲಸ ಮಾಡಿದ ಕಾರಣಕ್ಕೆ ಇದರ ಬಗ್ಗೆ ಅರಿವಿದೆ. ನನ್ನ ಮನೆಯಲ್ಲೇ ಅರ್ಧ ಡಜನ್ ವೈದ್ಯರಿದ್ದಾರೆ,” ಎಂದು ಸ್ಮರಿಸಿದರು.

ಕೈಗೆಟುಕುವ ದರದಲ್ಲಿ ಚಿಕಿತ್ಸೆ: ಡಿಸಿಎಂ ಮೆಚ್ಚುಗೆ
“ಡಾ. ವಿಕ್ರಮ್ ಅವರು ದೂರದ ಗುಲ್ಬರ್ಗದಿಂದ ಬಂದು ಇಲ್ಲಿ ಸೇವೆ ಸಲ್ಲಿಸಿ ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ದಿನಕ್ಕೆ ಕೇವಲ 10 ರೂಪಾಯಿ ನೀಡಿದರೆ 1 ಕೋಟಿವರೆಗೆ ಆರೋಗ್ಯ ವಿಮೆ ನೀಡುವುದಾಗಿ ಹೇಳಿದ್ದಾರೆ. ಖಾಸಗಿ ವಲಯವು ಸರ್ಕಾರದೊಂದಿಗೆ ಕೈಜೋಡಿಸಿ ಕಡಿಮೆ ವೆಚ್ಚದಲ್ಲಿ ಉತ್ತಮ ಆರೋಗ್ಯ ಸೇವೆ ನೀಡುವಂತಾಗಲಿ. ವಿಕ್ರಮ್ ಅವರ ತಂಡದ ಈ ಹೊಸ ಸಾಹಸಕ್ಕೆ ಶುಭವಾಗಲಿ,” ಎಂದು ಹಾರೈಸಿದರು.
“ಯುನೈಟೆಡ್ ಎಂದರೆ ಕನ್ನಡದಲ್ಲಿ ಒಗ್ಗಟ್ಟು. ಈ ಒಗ್ಗಟ್ಟು ಜನರ ಆರೋಗ್ಯ ರಕ್ಷಣೆ ಮಾಡಲಿ. ‘ಶುಭಂ ಕರೋತಿ ಕಲ್ಯಾಣಂ, ಆರೋಗ್ಯ ಧನಸಂಪದಂ…’ ಎಂಬ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಮಂಗಳವಾಗಲಿ,” ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ:-ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಕಾರ್ಯಕ್ರಮದಲ್ಲಿ ಮಾತನಾಡಿದ ಯುನೈಟೆಡ್ ಆಸ್ಪತ್ರೆಗಳ ಅಧ್ಯಕ್ಷರಾದ ಡಾ. ವಿಕ್ರಮ್ ಸಿದ್ದರೆಡ್ಡಿ, “ನಮ್ಮ ಆಹ್ವಾನವನ್ನು ಮನ್ನಿಸಿ ಆಗಮಿಸಿದ ಉಪಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಕೇವಲ 4 ವರ್ಷಗಳ ಅವಧಿಯಲ್ಲಿ ಯುನೈಟೆಡ್ ಆಸ್ಪತ್ರೆ ಜನರ ವಿಶ್ವಾಸಗಳಿಸಿದೆ. ‘ME Care’ ಯೋಜನೆಯು ಆವಿಷ್ಕಾರ, ಕೈಗೆಟುಕುವ ದರ ಮತ್ತು ಸಹಾನುಭೂತಿಯನ್ನು ಸಂಯೋಜಿಸುವ ನಮ್ಮ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ,” ಎಂದರು.
“ತುರ್ತು ಸಂದರ್ಭಗಳಲ್ಲಿ ಕುಟುಂಬಗಳ ಮೇಲಾಗುವ ಆರ್ಥಿಕ ಹೊರೆಯನ್ನು ಸಂಪೂರ್ಣವಾಗಿ ತಗ್ಗಿಸುವುದು ಮತ್ತು ಅತ್ಯುನ್ನತ ಗುಣಮಟ್ಟದ ಚಿಕಿತ್ಸೆ ನೀಡುವುದು ನಮ್ಮ ಗುರಿ. ಬೆಂಗಳೂರು ಮತ್ತು ಕಲಬುರಗಿಯಲ್ಲಿ ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಆರೋಗ್ಯ ಸೇವೆ ನೀಡುವಲ್ಲಿ ಯುನೈಟೆಡ್ ಆಸ್ಪತ್ರೆ ಸದಾ ಮುಂದಿರುತ್ತದೆ,” ಎಂದು ಅವರು ತಿಳಿಸಿದರು.

ಏನಿದು ‘ME Care’ ಯೋಜನೆ?
ಇದು ಒಂದು ವಿಶಿಷ್ಟ ತುರ್ತು ಆರೋಗ್ಯ ಯೋಜನೆಯಾಗಿದ್ದು, ದಿನಕ್ಕೆ ಕೇವಲ 10 ರೂ. (ವರ್ಷಕ್ಕೆ 3558 ರೂ.) ವೆಚ್ಚದಲ್ಲಿ 1 ಕೋಟಿ ರೂ.ವರೆಗಿನ ತುರ್ತು ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ. ಇದು ಜಯನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಸಂಪೂರ್ಣ ನಗದು ರಹಿತ (Cashless) ಮತ್ತು ಯಾವುದೇ ಗುಪ್ತ ಶುಲ್ಕಗಳಿಲ್ಲದ ಪಾರದರ್ಶಕ ಯೋಜನೆಯಾಗಿದೆ.
ಕಾರ್ಯಕ್ರಮದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್, ಆಸ್ಪತ್ರೆಯ ಹಿರಿಯ ವೈದ್ಯರು, ಸಿಬ್ಬಂದಿ ವರ್ಗ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

1 hour ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

2 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

4 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

4 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

6 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

6 hours ago