ರಾಜ್ಯ

ಕಾಂಗ್ರೆಸ್‌ಗೆ ಮತ ಹಾಕುವವರನ್ನು ಗುರುತಿಸಿ ಬೇರೆಡೆಗೆ ಶಿಫ್ಟ್‌ ಮಾಡಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 300 ಮಂದಿ ಸಂಸದರು ದೆಹಲಿಗೆ ಹೋಗಿ ಸಮಯ ಕೇಳಿದ್ದಾರೆ, ಆಯೋಗ ಸ್ಪಂದಿಸುತ್ತಿಲ್ಲ. ನಾವು ಹಗರಣವನ್ನು ಹೊರ ತಂದ ಬಳಿಕ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಆಯೋಗ ಮುಂದಾಗಿದೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಮತಗಳ್ಳತನದ ಮಾಹಿತಿಯನ್ನು ಪೂರ್ಣವಾಗಿ ನಾವು ಬಹಿರಂಗ ಪಡಿಸಿದರೆ ಅಲ್ಲೋಲ್ಲ ಕಲ್ಲೋಲವಾಗಲಿದೆ. ಬಿಜೆಪಿ ಅ„ಕಾರದಲ್ಲಿದ್ದರೆ ಮತಗಳ್ಳತನವನ್ನು ಮುಚ್ಚಿ ಹಾಕುತ್ತಾರೆ. ಅದಕ್ಕಾಗಿ ಅವರು ರಾಜೀನಾಮೆ ಕೊಟ್ಟು ಚುನಾವಣೆ ಬರಲಿ ಎಂದು ಸವಾಲು ಹಾಕಿದರು.

ಒಂದು ಕ್ಷೇತ್ರದಲ್ಲಿ 2.40 ಲಕ್ಷ ಮತಗಳಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಅಲ್ಪಸಂಖ್ಯಾತರು, ದಲಿತರ ಮತಗಳನ್ನು ಪಕ್ಕದ ಕ್ಷೇತ್ರಕ್ಕೆ ಸ್ಥಳಾಂತರಿಸಿ ಅನ್ಯಾಯ ಮಾಡಲಾಗಿದೆ. ಚಿಲುಮೆ ಸಂಸ್ಥೆಯ ಹಗರಣವನ್ನು ಗಮನದಲ್ಲಿಟ್ಟುಕೊಂಡು ಚುನಾವಣಾಧಿಕಾರಿಗಳೇ ದೂರು ದಾಖಲಿಸಿದ್ದರು. ತನಿಖೆಯಾಗಿ ಕೆಲವರನ್ನು ಅಮಾನತುಗೊಳಿಸಲಾಗಿತ್ತು, ಕೆಲ ಸಮಯದ ನಂತರ ಕೆಲವರು ಕರ್ತವ್ಯಕ್ಕೆ ಮರಳಿದ್ದಾರೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

6 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

6 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

21 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

22 hours ago