ರಾಜ್ಯ

ಕಾಂಗ್ರೆಸ್‌ಗೆ ಮತ ಹಾಕುವವರನ್ನು ಗುರುತಿಸಿ ಬೇರೆಡೆಗೆ ಶಿಫ್ಟ್‌ ಮಾಡಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 300 ಮಂದಿ ಸಂಸದರು ದೆಹಲಿಗೆ ಹೋಗಿ ಸಮಯ ಕೇಳಿದ್ದಾರೆ, ಆಯೋಗ ಸ್ಪಂದಿಸುತ್ತಿಲ್ಲ. ನಾವು ಹಗರಣವನ್ನು ಹೊರ ತಂದ ಬಳಿಕ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಆಯೋಗ ಮುಂದಾಗಿದೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಮತಗಳ್ಳತನದ ಮಾಹಿತಿಯನ್ನು ಪೂರ್ಣವಾಗಿ ನಾವು ಬಹಿರಂಗ ಪಡಿಸಿದರೆ ಅಲ್ಲೋಲ್ಲ ಕಲ್ಲೋಲವಾಗಲಿದೆ. ಬಿಜೆಪಿ ಅ„ಕಾರದಲ್ಲಿದ್ದರೆ ಮತಗಳ್ಳತನವನ್ನು ಮುಚ್ಚಿ ಹಾಕುತ್ತಾರೆ. ಅದಕ್ಕಾಗಿ ಅವರು ರಾಜೀನಾಮೆ ಕೊಟ್ಟು ಚುನಾವಣೆ ಬರಲಿ ಎಂದು ಸವಾಲು ಹಾಕಿದರು.

ಒಂದು ಕ್ಷೇತ್ರದಲ್ಲಿ 2.40 ಲಕ್ಷ ಮತಗಳಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಅಲ್ಪಸಂಖ್ಯಾತರು, ದಲಿತರ ಮತಗಳನ್ನು ಪಕ್ಕದ ಕ್ಷೇತ್ರಕ್ಕೆ ಸ್ಥಳಾಂತರಿಸಿ ಅನ್ಯಾಯ ಮಾಡಲಾಗಿದೆ. ಚಿಲುಮೆ ಸಂಸ್ಥೆಯ ಹಗರಣವನ್ನು ಗಮನದಲ್ಲಿಟ್ಟುಕೊಂಡು ಚುನಾವಣಾಧಿಕಾರಿಗಳೇ ದೂರು ದಾಖಲಿಸಿದ್ದರು. ತನಿಖೆಯಾಗಿ ಕೆಲವರನ್ನು ಅಮಾನತುಗೊಳಿಸಲಾಗಿತ್ತು, ಕೆಲ ಸಮಯದ ನಂತರ ಕೆಲವರು ಕರ್ತವ್ಯಕ್ಕೆ ಮರಳಿದ್ದಾರೆ ಎಂದು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 mins ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

23 mins ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

46 mins ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

57 mins ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

1 hour ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

2 hours ago