ರಾಜ್ಯ

ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ : ಸಿ.ಎಂ ಸಿದ್ದರಾಮಯ್ಯ ಬೇಸರ

ಗದಗ : ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು.

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

35 mins ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

37 mins ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

40 mins ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

42 mins ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

44 mins ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

48 mins ago