ರಾಜ್ಯ

ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ : ಸಿ.ಎಂ ಸಿದ್ದರಾಮಯ್ಯ ಬೇಸರ

ಗದಗ : ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು.

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago