ರಾಜ್ಯ

ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ

ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು.

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್‌ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ನಟ ಅನಿರುದ್ಧ್‌, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಸಾನ್ಯ ಅಯ್ಯರ್‌, ನಟ ಶೈನ್‌ ಶೆಟ್ಟಿ ಭಾಗಿಯಾಗಿದ್ದರು. ಇಂದು ಬೆಳಿಗ್ಗೆ 6 ಗಂಟೆಯಿಂದ ಶುರುವಾದ ಯೋಗಾಭ್ಯಾಸ ಕಾರ್ಯಕ್ರಮವು 8.30ರವರೆಗೆ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಯೋಗ ಭಾರತದ ಸಂಸ್ಕೃತಿಯ ಪ್ರತೀಕ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರವು ಯೋಗ ದಿನವನ್ನು ಉತ್ತಮವಾಗಿ ಆಚರಣೆ ಮಾಡಿದೆ. ಯೋಗ ಜೀವನವನ್ನು ಪರಿಪೂರ್ಣ ಮಾಡುತ್ತದೆ. ಎಲ್ಲರೂ ಯೋಗ ಮಾಡಿ ನಿರೋಗಿ ಆಗಿ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

15 mins ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

30 mins ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

40 mins ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

1 hour ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

2 hours ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

2 hours ago