Mysore
22
light rain

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಿಎಂ ಮನೆಗೆ ಬಾಂಬ್‌ ಇಡುವುದಾಗಿ ಬೆದರಿಕೆ ಸಂದೇಶ

siddaramaiah

ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್‌ ಕಚೇರಿಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್‌ ಬೆದರಿಕೆ ಹಾಕಲಾಗಿದೆ.

ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್‌ ಮೂಲಕ ಆತ್ಮಹತ್ಯಾ ಬಾಂಬ್‌ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್‌ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಲಾಗಿದೆ.

ಇಂದು ಇಸ್ಲಾಂನ ದುಲ್‌ ಹಜ್‌ ಪವಿತ್ರ ದಿನ. ಅಮೋನಿಯಂ ಸಲ್ಪರ್‌ ಬೇಸ್ಡ್‌ ಐಇಡಿ ಬಳಸಿ ಬೆಂಗಳೂರಿನ ಪಾಸ್‌ಪೋರ್ಟ್‌ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಂಬ್‌ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ಕಸಬ್‌ನನ್ನು ಗಲ್ಲೆಗೇರಿಸಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ಎಂದು ಇ-ಮೇಲ್‌ ಸಂದೇಶದಲ್ಲಿ ತಿಳಿಸಲಾಗಿದೆ.

ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್‌ ಪತ್ತೆದಳ, ಬಾಂಬ್‌ ನಿಷ್ಕ್ರಿಯ ದಳ ಪಾಸ್‌ಪೋರ್ಟ್‌ ಕಚೇರಿ, ಸಿಎಂ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!