siddaramaiah
ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಲಾಗಿದೆ.
ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಂ ಸಲ್ಪರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ಕಸಬ್ನನ್ನು ಗಲ್ಲೆಗೇರಿಸಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ಎಂದು ಇ-ಮೇಲ್ ಸಂದೇಶದಲ್ಲಿ ತಿಳಿಸಲಾಗಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಪಾಸ್ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…