ಬೆಂಗಳೂರು: ಇಂದು ಸಾವರ್ಕರ್ ಜನ್ಮದಿನ. ಈ ದಿನದಂದೇ ಬೆಂಗಳೂರಿನ ಯಲಹಂಕದ ನಾಲ್ಕನೇ ವಾರ್ಡ್ನ ಡೇರಿ ಸರ್ಕಲ್ ಬಳಿಯಿರುವ ಸಾವರ್ಕರ್ ಹೆಸರಿನ ಸೇತುವೆಗೆ ಕೆಲ ಪುಂಡರು ಮಸಿ ಬಳಿದಿದ್ದಾರೆ.
ಈ ಕೃತ್ಯ ಖಂಡಿಸಿ ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆ ಪೊಲೀಸ್ ಇಲಾಖೆ ಪ್ರವೀಣ್ ರಕ್ಷ ರಾಜ್ ಮತ್ತು ನಿಶ್ಚಿತ್ ಗೌಡ ಎಂಬುವವರನ್ನು ಬಂಧಿಸಿದ್ದಾರೆ.
ಸಾವರ್ಕರ್ಗೆ ಸಿಗುತ್ತಿರುವ ಮನ್ನಣೆ ಭಗತ್ ಸಿಂಗ್ ಅವರಿಗೆ ಸಿಗುತ್ತಿಲ್ಲ, ಈ ಸಾವರ್ಕರ್ ಹೆಸರಿನ ಸೇತುವೆಗೆ ಭಗತ್ ಸಿಂಗ್ ಸೇತುವೆ ಎಂದು ಮರು ನಾಮಕರಣ ಮಾಡಬೇಕು ಎಂದು ಪುಂಡರ ಗುಂಪೊಂದು ಸಾವರ್ಕರ್ ಜನ್ಮ ದಿನದಂದೇ ಯಲಹಂಕ ಸೇತುವೆಯಲ್ಲಿನ ಸಾವರ್ಕರ್ ಹೆಸರಿಗೆ ಮಸಿ ಬಳಿದಿದ್ದಾರೆ. ಈ ಸಂಬಂಧ ಮಾಗಡಿ ರೋಡ್ನ ಮೂವರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮೊದಲು ಸಾವರ್ಕರ್ ಬಗ್ಗೆ ತಿಳಿದುಕೊಳ್ಳಬೇಕು. ಈಗ ಮೂವರನ್ನು ಬಂಧಿಸಿದ್ದೀರಿ. ಉಳಿದವರನ್ನು ಶೀಘ್ರವೇ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…