ಬೆಂಗಳೂರು: ಇಂದು ಸಾವರ್ಕರ್ ಜನ್ಮದಿನ. ಈ ದಿನದಂದೇ ಬೆಂಗಳೂರಿನ ಯಲಹಂಕದ ನಾಲ್ಕನೇ ವಾರ್ಡ್ನ ಡೇರಿ ಸರ್ಕಲ್ ಬಳಿಯಿರುವ ಸಾವರ್ಕರ್ ಹೆಸರಿನ ಸೇತುವೆಗೆ ಕೆಲ ಪುಂಡರು ಮಸಿ ಬಳಿದಿದ್ದಾರೆ.
ಈ ಕೃತ್ಯ ಖಂಡಿಸಿ ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆ ಪೊಲೀಸ್ ಇಲಾಖೆ ಪ್ರವೀಣ್ ರಕ್ಷ ರಾಜ್ ಮತ್ತು ನಿಶ್ಚಿತ್ ಗೌಡ ಎಂಬುವವರನ್ನು ಬಂಧಿಸಿದ್ದಾರೆ.
ಸಾವರ್ಕರ್ಗೆ ಸಿಗುತ್ತಿರುವ ಮನ್ನಣೆ ಭಗತ್ ಸಿಂಗ್ ಅವರಿಗೆ ಸಿಗುತ್ತಿಲ್ಲ, ಈ ಸಾವರ್ಕರ್ ಹೆಸರಿನ ಸೇತುವೆಗೆ ಭಗತ್ ಸಿಂಗ್ ಸೇತುವೆ ಎಂದು ಮರು ನಾಮಕರಣ ಮಾಡಬೇಕು ಎಂದು ಪುಂಡರ ಗುಂಪೊಂದು ಸಾವರ್ಕರ್ ಜನ್ಮ ದಿನದಂದೇ ಯಲಹಂಕ ಸೇತುವೆಯಲ್ಲಿನ ಸಾವರ್ಕರ್ ಹೆಸರಿಗೆ ಮಸಿ ಬಳಿದಿದ್ದಾರೆ. ಈ ಸಂಬಂಧ ಮಾಗಡಿ ರೋಡ್ನ ಮೂವರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮೊದಲು ಸಾವರ್ಕರ್ ಬಗ್ಗೆ ತಿಳಿದುಕೊಳ್ಳಬೇಕು. ಈಗ ಮೂವರನ್ನು ಬಂಧಿಸಿದ್ದೀರಿ. ಉಳಿದವರನ್ನು ಶೀಘ್ರವೇ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…