ಬೆಂಗಳೂರು: ಇಂದು ಸಾವರ್ಕರ್ ಜನ್ಮದಿನ. ಈ ದಿನದಂದೇ ಬೆಂಗಳೂರಿನ ಯಲಹಂಕದ ನಾಲ್ಕನೇ ವಾರ್ಡ್ನ ಡೇರಿ ಸರ್ಕಲ್ ಬಳಿಯಿರುವ ಸಾವರ್ಕರ್ ಹೆಸರಿನ ಸೇತುವೆಗೆ ಕೆಲ ಪುಂಡರು ಮಸಿ ಬಳಿದಿದ್ದಾರೆ.
ಈ ಕೃತ್ಯ ಖಂಡಿಸಿ ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆ ಪೊಲೀಸ್ ಇಲಾಖೆ ಪ್ರವೀಣ್ ರಕ್ಷ ರಾಜ್ ಮತ್ತು ನಿಶ್ಚಿತ್ ಗೌಡ ಎಂಬುವವರನ್ನು ಬಂಧಿಸಿದ್ದಾರೆ.
ಸಾವರ್ಕರ್ಗೆ ಸಿಗುತ್ತಿರುವ ಮನ್ನಣೆ ಭಗತ್ ಸಿಂಗ್ ಅವರಿಗೆ ಸಿಗುತ್ತಿಲ್ಲ, ಈ ಸಾವರ್ಕರ್ ಹೆಸರಿನ ಸೇತುವೆಗೆ ಭಗತ್ ಸಿಂಗ್ ಸೇತುವೆ ಎಂದು ಮರು ನಾಮಕರಣ ಮಾಡಬೇಕು ಎಂದು ಪುಂಡರ ಗುಂಪೊಂದು ಸಾವರ್ಕರ್ ಜನ್ಮ ದಿನದಂದೇ ಯಲಹಂಕ ಸೇತುವೆಯಲ್ಲಿನ ಸಾವರ್ಕರ್ ಹೆಸರಿಗೆ ಮಸಿ ಬಳಿದಿದ್ದಾರೆ. ಈ ಸಂಬಂಧ ಮಾಗಡಿ ರೋಡ್ನ ಮೂವರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಖಂಡಿಸಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮೊದಲು ಸಾವರ್ಕರ್ ಬಗ್ಗೆ ತಿಳಿದುಕೊಳ್ಳಬೇಕು. ಈಗ ಮೂವರನ್ನು ಬಂಧಿಸಿದ್ದೀರಿ. ಉಳಿದವರನ್ನು ಶೀಘ್ರವೇ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…