terror suspects arrested
ಬೆಂಗಳೂರು: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ ಎನ್ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಉಗ್ರ ಟಿ ನಾಸಿರ್ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್ಐಎ ಬೆಂಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು ಬಂಧಿಸಿತ್ತು.
ಬಂಧಿತರನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್ಐಎ ಕೋರ್ಟ್ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅವರನ್ನು ಆರು ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ.ನಾಗರಾಜು, ಉತ್ತರ ವಿಭಾಗದ ನಗರ ಸಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಹಾಗೂ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮ್ಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ.
ಉಗ್ರ ಚಟುವಟಿಕೆಗೆ ಸಂಬಂಧಿಸಿದಂತೆ ಹಣ, ಚಿನ್ನಾಭರಣ ಎರಡು ವಾಕಿ ಟಾಕಿ ಸೇರಿದಂತೆ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…
ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು,…
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…