Categories: ರಾಜ್ಯ

ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತದೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ ಆದೇಶವಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಸರ್ಕಾರದ ಪರ ಎಂದು ತಿಳಿದುಕೊಳ್ಳುವ ಆಗತ್ಯವಿಲ್ಲ. ನಾವು ಅಧಿಕಾರದಲ್ಲಿದ್ದಾಗಲೂ 17 ಸೀಟ್‌ಗಳಲ್ಲಿ 13 ಗೆದ್ದಿದ್ದೆವು. ಕಾಂಗ್ರೆಸ್‌ ಪಕ್ಷದ ಶಾಸಕರೇ ರಾಜ್ಯದಲ್ಲಿ ಅಭಿವೃದ್ದಿ ಆಗುತ್ತಿಲ್ಲ ಎಂಬ ಹತಾಶೆಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

ಯಾವುದೇ ಸಿದ್ದತೆ ಮಾಡಿಕೊಳ್ಳದೇ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳಿಂದ ಅಭಿವೃದ್ದಿ ಕೆಲಸಗಳಿಗೆ ಆರ್ಥಿಕ ತೊಂದರೆ ಉಂಟಾಗಿದೆ ಎಂದು ಅವರ ಪಕ್ಷದ ಶಾಸಕರೇ ನಮ್ಮ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದ್ದು, ಸಿಎಂ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ ಎಂದು ಕಿಡಿಕಾಡಿದರು.

ಗ್ರಾಮ ಪಂಚಾಯಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಬೇಕಿದೆ. ಹಾಗೆಯೇ ಸರ್ಕಾರದಲ್ಲಿ ಹಣವಿಲ್ಲದೆ ಗುತ್ತಿಗೆ ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೂ ಸಂಬಳ ನೀಡಿಲ್ಲ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

11 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

12 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

12 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

12 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

12 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

13 hours ago