Categories: ರಾಜ್ಯ

ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತದೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ ಆದೇಶವಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಸರ್ಕಾರದ ಪರ ಎಂದು ತಿಳಿದುಕೊಳ್ಳುವ ಆಗತ್ಯವಿಲ್ಲ. ನಾವು ಅಧಿಕಾರದಲ್ಲಿದ್ದಾಗಲೂ 17 ಸೀಟ್‌ಗಳಲ್ಲಿ 13 ಗೆದ್ದಿದ್ದೆವು. ಕಾಂಗ್ರೆಸ್‌ ಪಕ್ಷದ ಶಾಸಕರೇ ರಾಜ್ಯದಲ್ಲಿ ಅಭಿವೃದ್ದಿ ಆಗುತ್ತಿಲ್ಲ ಎಂಬ ಹತಾಶೆಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

ಯಾವುದೇ ಸಿದ್ದತೆ ಮಾಡಿಕೊಳ್ಳದೇ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳಿಂದ ಅಭಿವೃದ್ದಿ ಕೆಲಸಗಳಿಗೆ ಆರ್ಥಿಕ ತೊಂದರೆ ಉಂಟಾಗಿದೆ ಎಂದು ಅವರ ಪಕ್ಷದ ಶಾಸಕರೇ ನಮ್ಮ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದ್ದು, ಸಿಎಂ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ ಎಂದು ಕಿಡಿಕಾಡಿದರು.

ಗ್ರಾಮ ಪಂಚಾಯಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಬೇಕಿದೆ. ಹಾಗೆಯೇ ಸರ್ಕಾರದಲ್ಲಿ ಹಣವಿಲ್ಲದೆ ಗುತ್ತಿಗೆ ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೂ ಸಂಬಳ ನೀಡಿಲ್ಲ ಎಂದು ಗ್ಯಾರಂಟಿ ಯೋಜನೆಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago