ರಾಜ್ಯ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್‌.28ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.‌28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್‌, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು, ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.

ಇನ್ನು ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೊಯ್ಲಿಗೆ ಬಂದಿರುವ ಅನೇಕ ಬೆಳೆಗಳು ಹಾಳಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಭಾರೀ ಆತಂಕಕ್ಕೊಳಗಾಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

1 hour ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

1 hour ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago