ರಾಜ್ಯ

ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

ಇನ್ನು ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆಮಿಷ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಾನಪ್ಪಾಡಿ ಅವರು ಅವರದೇ ವಿಡಿಯೋದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.

ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ ಎಂದು ಸವಾಲು ಹಾಕಿದರು. ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಥವಾ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರುತ್ತೆ ತಾನೇ ಎಂದು ಪ್ರಶ್ನಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago