ರಾಜ್ಯ

ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಮೂವರು ಯುವಕರು ಕಲಬುರ್ಗಿಗೆ ವಾಪಸ್‌

ಕಲಬುರ್ಗಿ: ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಕಲಬುರ್ಗಿಯ ಮೂವರು ಯುವಕರು ಭಾರತಕ್ಕೆ ವಾಪಸ್‌ ಆಗಿದ್ದಾರೆ.

ಈ ಮೂಲಕ ಕಲಬುರ್ಗಿಯ ಮೂವರು ಸೇರಿದಂತೆ 6 ಮಂದಿ ತವರಿಗೆ ಮರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿ ವಾಪಸ್‌ ಆದ ಕೆಲವೇ ದಿನಗಳಲ್ಲಿ ಭಾರತದ ಯುವಕರು ದೇಶಕ್ಕೆ ಮರಳಿದ್ದಾರೆ.

ಮುಂಬೈ ಮೂಲದ ಏಜೆಂಟ್‌ ವೆಬ್‌ಸೈಟ್‌ನಲ್ಲಿ ಪರಿಚಯ ಮಾಡಿಕೊಂಡು ಯುವಕರನ್ನು ಉಕ್ರೇನ್‌ಗೆ ಕರೆಸಿಕೊಂಡಿದ್ದ.

ಕೆಲಸ ಕೊಡಿಸುವ ನೆಪದಲ್ಲಿ ಯುವಕರನ್ನು ಉಕ್ರೇನ್‌ಗೆ ಕರೆಸಿಕೊಳ್ಳಲಾಗಿದ್ದು, ಯುದ್ಧ ಭೂಮಿಯಲ್ಲಿ ಯುವಕರನ್ನು ಸೈನ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಸೈನ್ಯದಲ್ಲಿ ಬಂಕರ್‌ಗಳನ್ನು ಅಗೆಯುವ ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು.

ಯುವಕರನನು ಮರಳಿ ತರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಲಬುರ್ಗಿ ಯುವಕರನ್ನು ಉಕ್ರೇನ್‌ನಿಂದ ಭಾರತಕ್ಕೆ ವಾಪಸ್‌ ಕರೆಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

4 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

5 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

6 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago