ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ಭರವಸೆ ಈಗ ಠುಸ್ ಆಗಿದೆ.
ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ ಕಳೆದರೂ ಹಣ ಮಾತ್ರ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಕಳೆದ ಮೂರು ತಿಂಗಳಿನಿಂದ ಸ್ಟಾಪ್ ಆಗಿದ್ದು, ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲು ಸರ್ಕಾರದ ಬಳಿ ಹಣವಿಲ್ಲವೇ ಎಂದು ಕೆಲ ಮಹಿಳೆಯರು ಪ್ರಶ್ನೆ ಹಾಕುತ್ತಿದ್ದಾರೆ.
ವರಮಹಾಲಕ್ಷ್ಮೀ ಹಬ್ಬಕ್ಕಾದರೂ ಹಣ ಬರಬಹುದು ಎಂದು ಗೃಹಿಣಿಯರು ಕಾಯುತ್ತಾ ಕುಳಿತಿದ್ದರು. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಕೂಡ ನೀಡಿದ್ದರು. ಆದರೆ ಗೃಹಲಕ್ಷ್ಮೀ ಹಣ ಮಾತ್ರ ಇನ್ನೂ ಬಂದಿಲ್ಲ. ಹಣ ಖಾತೆಗೆ ಜಮೆ ಆಗಿದೆಯಾ ಅಥವಾ ಇಲ್ಲವೇ ಎಂದು ಫಲಾನುಭವಿಗಳು ಬ್ಯಾಂಕ್ಗೆ ಅಲೆದು ಅಲೆದು ಸುಸ್ತಾಗಿದ್ದಾರೆ.
ಗೃಹಲಕ್ಷ್ಮೀ ಹಣವನ್ನೇ ನಂಬಿಕೊಂಡು ಕೆಲ ಮಹಿಳೆಯರು ಮನೆಗಳಿಗೆ ಕಂತಿನ ರೂಪದಲ್ಲಿ ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಬಾರದೇ ಇರುವುದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…