ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ಭರವಸೆ ಈಗ ಠುಸ್ ಆಗಿದೆ.
ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ ಕಳೆದರೂ ಹಣ ಮಾತ್ರ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಕಳೆದ ಮೂರು ತಿಂಗಳಿನಿಂದ ಸ್ಟಾಪ್ ಆಗಿದ್ದು, ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲು ಸರ್ಕಾರದ ಬಳಿ ಹಣವಿಲ್ಲವೇ ಎಂದು ಕೆಲ ಮಹಿಳೆಯರು ಪ್ರಶ್ನೆ ಹಾಕುತ್ತಿದ್ದಾರೆ.
ವರಮಹಾಲಕ್ಷ್ಮೀ ಹಬ್ಬಕ್ಕಾದರೂ ಹಣ ಬರಬಹುದು ಎಂದು ಗೃಹಿಣಿಯರು ಕಾಯುತ್ತಾ ಕುಳಿತಿದ್ದರು. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಕೂಡ ನೀಡಿದ್ದರು. ಆದರೆ ಗೃಹಲಕ್ಷ್ಮೀ ಹಣ ಮಾತ್ರ ಇನ್ನೂ ಬಂದಿಲ್ಲ. ಹಣ ಖಾತೆಗೆ ಜಮೆ ಆಗಿದೆಯಾ ಅಥವಾ ಇಲ್ಲವೇ ಎಂದು ಫಲಾನುಭವಿಗಳು ಬ್ಯಾಂಕ್ಗೆ ಅಲೆದು ಅಲೆದು ಸುಸ್ತಾಗಿದ್ದಾರೆ.
ಗೃಹಲಕ್ಷ್ಮೀ ಹಣವನ್ನೇ ನಂಬಿಕೊಂಡು ಕೆಲ ಮಹಿಳೆಯರು ಮನೆಗಳಿಗೆ ಕಂತಿನ ರೂಪದಲ್ಲಿ ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಬಾರದೇ ಇರುವುದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…