ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ ಅವಘಡದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ನಟ ರಾಕಿಂಗ್ ಸ್ಟಾರ್ ಯಶ್ ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಯಶ್ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಗ್ರಾಮಕ್ಕೆ ಭೇಟಿ ನೀಡುವ ನಟ ಯಶ್, ಯುವಕರ ಕುಟುಂಬದರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಯಶ್ ಗ್ರಾಮಕ್ಕೆ ಬರಲೇಬೇಕು, ಗಾಯಾಳುಗಳನ್ನು ಹಾಗೂ ಮೃತ ಯುವಕರ ಕುಟುಂಬದವರನ್ನು ಯಶ್ ಭೇಟಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದರು.
ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…