ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಈ ಅವಘಡದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ನಟ ರಾಕಿಂಗ್ ಸ್ಟಾರ್ ಯಶ್ ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಯಶ್ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಗ್ರಾಮಕ್ಕೆ ಭೇಟಿ ನೀಡುವ ನಟ ಯಶ್, ಯುವಕರ ಕುಟುಂಬದರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಯಶ್ ಗ್ರಾಮಕ್ಕೆ ಬರಲೇಬೇಕು, ಗಾಯಾಳುಗಳನ್ನು ಹಾಗೂ ಮೃತ ಯುವಕರ ಕುಟುಂಬದವರನ್ನು ಯಶ್ ಭೇಟಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದರು.
ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…