ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರಾಗಿವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು, ಹೊಳೆ ನರಸೀಪುರದ ಅಕ್ಕಿ ಹೆಬ್ಬಾಳು-ಮಂಡಗೆರೆ,ಮಂಡಗೆರೆ ಹೊಳೆನರಸೀಪುರ ಹಾಗೂ ಕಡೂರು ಜಂಕ್ಷನ್-ಬಿರೂದು ನಡುವೆ ಮೇಲ್ಸೇತುವೆ ನಿರ್ಮಾಣವಾಗಲಿವೆ.
ಮೇಲ್ಸೇತುವೆಗಳ ನಿರ್ಮಾಣಕ್ಕೆ 101.47 ಕೋಟಿ ಅನುದಾನ ನೀಡಲಾಗುತ್ತದೆ.
ಈ ಯೋಜನೆಯನ್ನು ವಿಶೇಷ ರೈಲ್ವೆ ಯೋಜನೆಗಳೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ.