ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.
ಡಿಸೆಂಬರ್ 18 ರಂದು ಚಾಮರಾಜ ಪೇಟೆಯಲಿ 64 ವರ್ಷದ ವೃದ್ಧರೊಬ್ಬರು ದೀರ್ಘಕಾಲಿನ ಅನಾರೋಗ್ಯದಿಂದ ಮೃತಪಟ್ಟಿದ್ದರು. ಜೊತೆಗೆ 44 ವರ್ಷದ ಹಾಗೂ 76 ವರ್ಷದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ರಾಜ್ಯದಲ್ಲಿ ನಿನ್ನೆಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ನಿನ್ನೆ 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ. ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ಕಂಡುಬಂದಿದೆ.
ಬಸ್ ಪ್ರಯಾಣಿಕರಿಗೆ ಮಾಸ್ಕ್ ಖಡ್ಡಾಯ: ರಾಜ್ಯದಲ್ಲಿ ಕೋವಿಡ್ ಭೀತಿಯ ಹಿನ್ನಲೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯಂತೆ ರಾಜ್ಯದ ಯಾವುದೇ ರಸ್ತೆ ಸಾರಿಗೆಯಲ್ಲಿ ಪ್ರಯಾಣ ಮಾಡುವವರು ಖಡ್ಡಾಯವಾಗಿ ಮಾಸ್ಕ ದರಿಸಬೇಕಾಗಿ ಎಂದು ತಿಳಿಸಿದೆ. ಈ ಬಗ್ಗೆ ತಿಳಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…