ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.
ಡಿಸೆಂಬರ್ 18 ರಂದು ಚಾಮರಾಜ ಪೇಟೆಯಲಿ 64 ವರ್ಷದ ವೃದ್ಧರೊಬ್ಬರು ದೀರ್ಘಕಾಲಿನ ಅನಾರೋಗ್ಯದಿಂದ ಮೃತಪಟ್ಟಿದ್ದರು. ಜೊತೆಗೆ 44 ವರ್ಷದ ಹಾಗೂ 76 ವರ್ಷದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ರಾಜ್ಯದಲ್ಲಿ ನಿನ್ನೆಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ನಿನ್ನೆ 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ. ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ಕಂಡುಬಂದಿದೆ.
ಬಸ್ ಪ್ರಯಾಣಿಕರಿಗೆ ಮಾಸ್ಕ್ ಖಡ್ಡಾಯ: ರಾಜ್ಯದಲ್ಲಿ ಕೋವಿಡ್ ಭೀತಿಯ ಹಿನ್ನಲೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯಂತೆ ರಾಜ್ಯದ ಯಾವುದೇ ರಸ್ತೆ ಸಾರಿಗೆಯಲ್ಲಿ ಪ್ರಯಾಣ ಮಾಡುವವರು ಖಡ್ಡಾಯವಾಗಿ ಮಾಸ್ಕ ದರಿಸಬೇಕಾಗಿ ಎಂದು ತಿಳಿಸಿದೆ. ಈ ಬಗ್ಗೆ ತಿಳಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…