ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ.
ಉಚ್ಚಿಲದ ಖಾಸಗಿ ರೆಸಾರ್ಟ್ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ ಮೊಹಲ್ಲಾದ ಕೀರ್ತನಾ, ಮೈಸೂರು ಕುರುಬರಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಹಾಗೂ ಮೈಸೂರು ಕೆ.ಆರ್.ಮೊಹಲ್ಲಾ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು ಮೂಲದ ಯುವತಿಯರು ಟ್ರಿಪ್ಗೆಂದು ಮಂಗಳೂರಿಗೆ ಬಂದಿದ್ದರು. ರೆಸಾರ್ಟ್ನಲ್ಲಿ ಸ್ವಿಮ್ಮಿಂಗ್ ಫೂಲ್ಗೆ ಇಳಿದಾಗ ಈ ಘಟನೆ ನಡೆದಿದೆ.
ಘಟನೆಯ ವಿವರ: ಇಂದು ಬೆಳಿಗ್ಗೆ 10 ಗಂಟೆಯ ವೇಳೆಗೆ ನೀರಾಟವಾಡಲು ಯುವತಿಯರು ಕೊಳಕ್ಕೆ ಇಳಿದಿದ್ದರು. ಈಜುಕೊಳದ ನೀರಿನತ್ತ ಮೊಬೈಲ್ ಫೋನ್ನ ವಿಡಿಯೊ ಕ್ಯಾಮರಾ ಆನ್ ಮಾಡಿಟ್ಟು ಯುವತಿಯರು ಈಜಾಡುತ್ತಿದ್ದರು. ಆಳವಿರುವ ಕಡೆ ತೆರಳಿದ ವೇಳೆ ಈಜು ಬಾರದೇ ಮುಳುಗಿ ಮೃತಪಟ್ಟಿದ್ದಾರೆ.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…