ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ.
ಉಚ್ಚಿಲದ ಖಾಸಗಿ ರೆಸಾರ್ಟ್ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ ಮೊಹಲ್ಲಾದ ಕೀರ್ತನಾ, ಮೈಸೂರು ಕುರುಬರಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಹಾಗೂ ಮೈಸೂರು ಕೆ.ಆರ್.ಮೊಹಲ್ಲಾ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು ಮೂಲದ ಯುವತಿಯರು ಟ್ರಿಪ್ಗೆಂದು ಮಂಗಳೂರಿಗೆ ಬಂದಿದ್ದರು. ರೆಸಾರ್ಟ್ನಲ್ಲಿ ಸ್ವಿಮ್ಮಿಂಗ್ ಫೂಲ್ಗೆ ಇಳಿದಾಗ ಈ ಘಟನೆ ನಡೆದಿದೆ.
ಘಟನೆಯ ವಿವರ: ಇಂದು ಬೆಳಿಗ್ಗೆ 10 ಗಂಟೆಯ ವೇಳೆಗೆ ನೀರಾಟವಾಡಲು ಯುವತಿಯರು ಕೊಳಕ್ಕೆ ಇಳಿದಿದ್ದರು. ಈಜುಕೊಳದ ನೀರಿನತ್ತ ಮೊಬೈಲ್ ಫೋನ್ನ ವಿಡಿಯೊ ಕ್ಯಾಮರಾ ಆನ್ ಮಾಡಿಟ್ಟು ಯುವತಿಯರು ಈಜಾಡುತ್ತಿದ್ದರು. ಆಳವಿರುವ ಕಡೆ ತೆರಳಿದ ವೇಳೆ ಈಜು ಬಾರದೇ ಮುಳುಗಿ ಮೃತಪಟ್ಟಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…