ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ.
ಉಚ್ಚಿಲದ ಖಾಸಗಿ ರೆಸಾರ್ಟ್ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ ಮೊಹಲ್ಲಾದ ಕೀರ್ತನಾ, ಮೈಸೂರು ಕುರುಬರಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಹಾಗೂ ಮೈಸೂರು ಕೆ.ಆರ್.ಮೊಹಲ್ಲಾ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು ಮೂಲದ ಯುವತಿಯರು ಟ್ರಿಪ್ಗೆಂದು ಮಂಗಳೂರಿಗೆ ಬಂದಿದ್ದರು. ರೆಸಾರ್ಟ್ನಲ್ಲಿ ಸ್ವಿಮ್ಮಿಂಗ್ ಫೂಲ್ಗೆ ಇಳಿದಾಗ ಈ ಘಟನೆ ನಡೆದಿದೆ.
ಘಟನೆಯ ವಿವರ: ಇಂದು ಬೆಳಿಗ್ಗೆ 10 ಗಂಟೆಯ ವೇಳೆಗೆ ನೀರಾಟವಾಡಲು ಯುವತಿಯರು ಕೊಳಕ್ಕೆ ಇಳಿದಿದ್ದರು. ಈಜುಕೊಳದ ನೀರಿನತ್ತ ಮೊಬೈಲ್ ಫೋನ್ನ ವಿಡಿಯೊ ಕ್ಯಾಮರಾ ಆನ್ ಮಾಡಿಟ್ಟು ಯುವತಿಯರು ಈಜಾಡುತ್ತಿದ್ದರು. ಆಳವಿರುವ ಕಡೆ ತೆರಳಿದ ವೇಳೆ ಈಜು ಬಾರದೇ ಮುಳುಗಿ ಮೃತಪಟ್ಟಿದ್ದಾರೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…