ಹಂಪಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದ ಪ್ರಮುಖ ಡ್ಯಾಂಗಳು ಭಾಗಶಃ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದ್ದು ಜಲಾಶಯಕ್ಕೆ ಹೆಚ್ಚಿನ ಒಳಹರಿವು ಆಗುತ್ತಿದ್ದು, ಜನರಿಗೆ ಕೃಷಿಗಾಗಿ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ಸೂಚಿಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಜು.18ಕ್ಕೆ ಜಲಾಶಯದಲ್ಲಿ 46,802 ಟಿಎಂಸಿ ನೀರು ಸಂಗ್ರಹವಾಗಿದೆ. ಹಾಗೂ ತುಂಗೆಗೆ 1,04,060 ಕ್ಯೂ. ಒಳಹರಿವು ನೀರು ಸೇರುತ್ತಿದ್ದು, ಹೀಗೆ ಮುಂದುವರಿದರೆ ವಾರದೊಳಗೆ ತುಂಗೆ ಭರ್ತಿಯಾಗಲಿದೆ. ಹೀಗಾಗಿ ಸಭೆ ನಡೆಸದೇ ಜನರ ಹಿತದೃಷ್ಠಿಯಿಂದ ಮುಂಗಡವಾಗಿ ನಾಲೆಗೆ ನೀರು ಹರಿಸಲು ಸೂಚನೆ ನೀಡಿರುವುದಾಗಿ ಸಚಿವ ತಂಗಡಗಿ ಹೇಳಿದರು.
ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ…
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್ಪುರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…