ಹಂಪಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದ ಪ್ರಮುಖ ಡ್ಯಾಂಗಳು ಭಾಗಶಃ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದ್ದು ಜಲಾಶಯಕ್ಕೆ ಹೆಚ್ಚಿನ ಒಳಹರಿವು ಆಗುತ್ತಿದ್ದು, ಜನರಿಗೆ ಕೃಷಿಗಾಗಿ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ಸೂಚಿಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಜು.18ಕ್ಕೆ ಜಲಾಶಯದಲ್ಲಿ 46,802 ಟಿಎಂಸಿ ನೀರು ಸಂಗ್ರಹವಾಗಿದೆ. ಹಾಗೂ ತುಂಗೆಗೆ 1,04,060 ಕ್ಯೂ. ಒಳಹರಿವು ನೀರು ಸೇರುತ್ತಿದ್ದು, ಹೀಗೆ ಮುಂದುವರಿದರೆ ವಾರದೊಳಗೆ ತುಂಗೆ ಭರ್ತಿಯಾಗಲಿದೆ. ಹೀಗಾಗಿ ಸಭೆ ನಡೆಸದೇ ಜನರ ಹಿತದೃಷ್ಠಿಯಿಂದ ಮುಂಗಡವಾಗಿ ನಾಲೆಗೆ ನೀರು ಹರಿಸಲು ಸೂಚನೆ ನೀಡಿರುವುದಾಗಿ ಸಚಿವ ತಂಗಡಗಿ ಹೇಳಿದರು.
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…