ರಾಜ್ಯ

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌: ಆರ್‌.ಅಶೋಕ

ಜೆಡಿಎಸ್‌ನದ್ದೇ ಕ್ಷೇತ್ರ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖವಾಗಿದೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.

ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

5 mins ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

31 mins ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

37 mins ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

45 mins ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

56 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

2 hours ago