Minister Eshwar Khandre
ಬೆಂಗಳೂರು : ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಮೂರು ಮರಿಗಳ ರಕ್ಷಣೆಯೊಂದಿಗೆ ಸೆರೆ ಹಿಡಿಯಲಾಗಿರುವ ಈ ಹೆಣ್ಣು ಹುಲಿ ವಸತಿ ಪ್ರದೇಶಗಳಿಗೆ ಬಂದು ಹಲವು ಜಾನುವಾರಗಳ ಮೇಲೆ ದಾಳಿ ಮಾಡಿತ್ತು ಎಂಬುದನ್ನು ಖಚಿತಪಡಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಸಚಿವರು ವಿವರಿಸಿದರು.
ಇದನ್ನು ಓದಿ: ಚಾಮರಾಜನಗರ | ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ಸೆರೆ
ಪ್ರಸ್ತುತ ಸೆರೆ ಹಿಡಿಲಾದ ಹೆಣ್ಣು ಹುಲಿ ಮತ್ತು ರಕ್ಷಿಸಲಾದ ಮೂರು ಮರಿಗಳು ಪಶುವೈದ್ಯರ ನಿಗಾದಲ್ಲಿವೆ. ಕಾಡಿನ ಹೊರಗೆ ಸಂಚರಿಸುತ್ತಿರುವ ಹುಲಿಗಳ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇತ್ತೀಚೆಗೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವಸತಿ ಪ್ರದೇಶಗಳಲ್ಲಿ ಹುಲಿಗಳು ಕಾಣಿಸಿಕೊಂಡು ಜನ, ಜಾನುವಾರುಗಳ ಮೇಲೆ ಪದೇಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಂತಹ ಹುಲಿಗಳನ್ನು ಗುರುತಿಸಿ ಸೆರೆ ಹಿಡಿಯಲು ಆದೇಶ ನೀಡಲಾಗಿತ್ತು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…