Tigers die due to poisoning CCF Hiralal
ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ ಕಪ್ಪುಚುಕ್ಕೆ ಎಂದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಗಳು ಯಾವ ಕಾರಣಕ್ಕೆ ಸತ್ತಿವೆ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ವಿಸ್ತೃತ ತನಿಖೆ ಆಗಿ ಏನಾಗಿದೆ ಎನ್ನುವ ಮಾಹಿತಿ ಹೊರ ಬರಲಿ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಏನೇನು ನಡೆಯುತ್ತಿದೆಯೋ ಗೊತ್ತಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ. ಆದರೆ, ಕ್ರಾಂತಿ ಆಗುತ್ತೆ ಅಂತ ಮುಖ್ಯಮಂತ್ರಿಗಳ ಆಪ್ತರೇ ಹೇಳಿದ್ದಾರೆ. ಅದನ್ನಷ್ಟೇ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸಚಿವ ಕೆ.ಎನ್.ರಾಜಣ್ಣ ಅವರು ಸೆಪ್ಟೆಂಬರ್ ತಿಂಗಳಲ್ಲಿ ಬದಲಾವಣೆ ಆಗುತ್ತದೆ, ಕ್ರಾಂತಿ ನಡೆಯುತ್ತದೆ ಎಂದು ಹೇಳಿದ್ದಾರೆ. ಅದು ಕ್ರಾಂತಿಯೋ ಏನೋ ನನಗೆ ಗೊತ್ತಿಲ್ಲ. ಅದು ಏನು ಎಂಬುದನ್ನು ರಾಜಣ್ಣ ಅಥವಾ ಸಿಎಂ ಅವರೇ ಹೇಳಬೇಕು. ಅವರ ಪಕ್ಷದ ಬೆಳವಣಿಗೆ ಬಗ್ಗೆ ನನಗೆ ಹೇಗೆ ಗೊತ್ತಾಗಲಿದೆ? ಎಂದರು.
ಅಶೋಕ್ ಭೇಟಿ ಸೌಹಾರ್ದ ಭೇಟಿಯಷ್ಟೇ
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಭೇಟಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ದೆಹಲಿಯ ನನ್ನ ಮನೆಗೆ ಅಶೋಕ್ ಬಂದಿದ್ದರು. ನಾವು ಅವರು ಅಣ್ಣತಮ್ಮಂದಿರು. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ. ದೆಹಲಿಯಲ್ಲಿ ಹೊಸದಾಗಿ ಸರ್ಕಾರಿ ನಿವಾಸಕ್ಕೆ ನಾನು ಸ್ಥಳಾಂತರಗೊಂಡಿದ್ದೇನೆ. ಮೊದಲ ಬಾರಿಗೆ ಅವರು ಬಂದಿದ್ದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ವಿಷಯ ನನಗೇನೂ ಗೊತ್ತಿಲ್ಲ ಎಂದರು.
ಅಪ್ರತಿಮ ಆಡಳಿತಗಾರ ಕೆಂಪೇಗೌಡ
ನಾಡಪ್ರಭು ಕೆಂಪೇಗೌಡ ಬೆಂಗಳೂರಿನ ನಿರ್ಮಾತೃ ಮತ್ತು ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ ಎಂಬುದನ್ನು ಅನುಕ್ಷಣವೂ ಸ್ಮರಿಸೋಣ ಎಂದಿದ್ದಾರೆ ಅವರು.
ಅಭಿವೃದ್ಧಿ, ನೆಮ್ಮದಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ದೂರದೃಷ್ಟಿಯ ಹಾದಿ ನಮಗೆಲ್ಲರಿಗೂ ಮಾದರಿ, ಪ್ರೇರಣೆ. ವಿಜ್ಞಾನ, ತಂತ್ರಜ್ಞಾನ, ಅವಿಷ್ಕಾರ, ಕೈಗಾರಿಕೆ, ಉದ್ಯೋಗಾವಕಾಶ ಸೇರಿ ಅನೇಕ ರೀತಿಯಲ್ಲಿ ಜಗತ್ತಿನ ಮುಂಚೂಣಿ ನಗರವಾಗಿರುವ ಬೆಂಗಳೂರಿನ ಭವ್ಯ ಪರಂಪರೆಯನ್ನು ಮುಂದುವರಿಸೋಣ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…