Tigers die due to poisoning CCF Hiralal
ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ ಕಪ್ಪುಚುಕ್ಕೆ ಎಂದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಗಳು ಯಾವ ಕಾರಣಕ್ಕೆ ಸತ್ತಿವೆ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ವಿಸ್ತೃತ ತನಿಖೆ ಆಗಿ ಏನಾಗಿದೆ ಎನ್ನುವ ಮಾಹಿತಿ ಹೊರ ಬರಲಿ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಏನೇನು ನಡೆಯುತ್ತಿದೆಯೋ ಗೊತ್ತಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ. ಆದರೆ, ಕ್ರಾಂತಿ ಆಗುತ್ತೆ ಅಂತ ಮುಖ್ಯಮಂತ್ರಿಗಳ ಆಪ್ತರೇ ಹೇಳಿದ್ದಾರೆ. ಅದನ್ನಷ್ಟೇ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸಚಿವ ಕೆ.ಎನ್.ರಾಜಣ್ಣ ಅವರು ಸೆಪ್ಟೆಂಬರ್ ತಿಂಗಳಲ್ಲಿ ಬದಲಾವಣೆ ಆಗುತ್ತದೆ, ಕ್ರಾಂತಿ ನಡೆಯುತ್ತದೆ ಎಂದು ಹೇಳಿದ್ದಾರೆ. ಅದು ಕ್ರಾಂತಿಯೋ ಏನೋ ನನಗೆ ಗೊತ್ತಿಲ್ಲ. ಅದು ಏನು ಎಂಬುದನ್ನು ರಾಜಣ್ಣ ಅಥವಾ ಸಿಎಂ ಅವರೇ ಹೇಳಬೇಕು. ಅವರ ಪಕ್ಷದ ಬೆಳವಣಿಗೆ ಬಗ್ಗೆ ನನಗೆ ಹೇಗೆ ಗೊತ್ತಾಗಲಿದೆ? ಎಂದರು.
ಅಶೋಕ್ ಭೇಟಿ ಸೌಹಾರ್ದ ಭೇಟಿಯಷ್ಟೇ
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಭೇಟಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ದೆಹಲಿಯ ನನ್ನ ಮನೆಗೆ ಅಶೋಕ್ ಬಂದಿದ್ದರು. ನಾವು ಅವರು ಅಣ್ಣತಮ್ಮಂದಿರು. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ. ದೆಹಲಿಯಲ್ಲಿ ಹೊಸದಾಗಿ ಸರ್ಕಾರಿ ನಿವಾಸಕ್ಕೆ ನಾನು ಸ್ಥಳಾಂತರಗೊಂಡಿದ್ದೇನೆ. ಮೊದಲ ಬಾರಿಗೆ ಅವರು ಬಂದಿದ್ದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ವಿಷಯ ನನಗೇನೂ ಗೊತ್ತಿಲ್ಲ ಎಂದರು.
ಅಪ್ರತಿಮ ಆಡಳಿತಗಾರ ಕೆಂಪೇಗೌಡ
ನಾಡಪ್ರಭು ಕೆಂಪೇಗೌಡ ಬೆಂಗಳೂರಿನ ನಿರ್ಮಾತೃ ಮತ್ತು ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ ಎಂಬುದನ್ನು ಅನುಕ್ಷಣವೂ ಸ್ಮರಿಸೋಣ ಎಂದಿದ್ದಾರೆ ಅವರು.
ಅಭಿವೃದ್ಧಿ, ನೆಮ್ಮದಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ದೂರದೃಷ್ಟಿಯ ಹಾದಿ ನಮಗೆಲ್ಲರಿಗೂ ಮಾದರಿ, ಪ್ರೇರಣೆ. ವಿಜ್ಞಾನ, ತಂತ್ರಜ್ಞಾನ, ಅವಿಷ್ಕಾರ, ಕೈಗಾರಿಕೆ, ಉದ್ಯೋಗಾವಕಾಶ ಸೇರಿ ಅನೇಕ ರೀತಿಯಲ್ಲಿ ಜಗತ್ತಿನ ಮುಂಚೂಣಿ ನಗರವಾಗಿರುವ ಬೆಂಗಳೂರಿನ ಭವ್ಯ ಪರಂಪರೆಯನ್ನು ಮುಂದುವರಿಸೋಣ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…