ರಾಜ್ಯ

ಹುಲಿ ಸಾವು ರಾಜ್ಯಕ್ಕೆ ಕಪ್ಪು ಚುಕ್ಕೆ : ಎಚ್‌ಡಿಕೆ

ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ ಕಪ್ಪುಚುಕ್ಕೆ ಎಂದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಗಳು ಯಾವ ಕಾರಣಕ್ಕೆ ಸತ್ತಿವೆ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ವಿಸ್ತೃತ ತನಿಖೆ ಆಗಿ ಏನಾಗಿದೆ ಎನ್ನುವ ಮಾಹಿತಿ ಹೊರ ಬರಲಿ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಏನೇನು ನಡೆಯುತ್ತಿದೆಯೋ ಗೊತ್ತಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ. ಆದರೆ, ಕ್ರಾಂತಿ ಆಗುತ್ತೆ ಅಂತ ಮುಖ್ಯಮಂತ್ರಿಗಳ ಆಪ್ತರೇ ಹೇಳಿದ್ದಾರೆ. ಅದನ್ನಷ್ಟೇ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸಚಿವ ಕೆ.ಎನ್.ರಾಜಣ್ಣ ಅವರು ಸೆಪ್ಟೆಂಬರ್ ತಿಂಗಳಲ್ಲಿ ಬದಲಾವಣೆ ಆಗುತ್ತದೆ, ಕ್ರಾಂತಿ ನಡೆಯುತ್ತದೆ ಎಂದು ಹೇಳಿದ್ದಾರೆ. ಅದು ಕ್ರಾಂತಿಯೋ ಏನೋ ನನಗೆ ಗೊತ್ತಿಲ್ಲ. ಅದು ಏನು ಎಂಬುದನ್ನು ರಾಜಣ್ಣ ಅಥವಾ ಸಿಎಂ ಅವರೇ ಹೇಳಬೇಕು. ಅವರ ಪಕ್ಷದ ಬೆಳವಣಿಗೆ ಬಗ್ಗೆ ನನಗೆ ಹೇಗೆ ಗೊತ್ತಾಗಲಿದೆ? ಎಂದರು.

ಅಶೋಕ್ ಭೇಟಿ ಸೌಹಾರ್ದ ಭೇಟಿಯಷ್ಟೇ
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಭೇಟಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ದೆಹಲಿಯ ನನ್ನ ಮನೆಗೆ ಅಶೋಕ್ ಬಂದಿದ್ದರು. ನಾವು ಅವರು ಅಣ್ಣತಮ್ಮಂದಿರು. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ. ದೆಹಲಿಯಲ್ಲಿ ಹೊಸದಾಗಿ ಸರ್ಕಾರಿ ನಿವಾಸಕ್ಕೆ ನಾನು ಸ್ಥಳಾಂತರಗೊಂಡಿದ್ದೇನೆ. ಮೊದಲ ಬಾರಿಗೆ ಅವರು ಬಂದಿದ್ದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ವಿಷಯ ನನಗೇನೂ ಗೊತ್ತಿಲ್ಲ ಎಂದರು.

ಅಪ್ರತಿಮ ಆಡಳಿತಗಾರ ಕೆಂಪೇಗೌಡ
ನಾಡಪ್ರಭು ಕೆಂಪೇಗೌಡ ಬೆಂಗಳೂರಿನ ನಿರ್ಮಾತೃ ಮತ್ತು ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ ಎಂಬುದನ್ನು ಅನುಕ್ಷಣವೂ ಸ್ಮರಿಸೋಣ ಎಂದಿದ್ದಾರೆ ಅವರು.

ಅಭಿವೃದ್ಧಿ, ನೆಮ್ಮದಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ದೂರದೃಷ್ಟಿಯ ಹಾದಿ ನಮಗೆಲ್ಲರಿಗೂ ಮಾದರಿ, ಪ್ರೇರಣೆ. ವಿಜ್ಞಾನ, ತಂತ್ರಜ್ಞಾನ, ಅವಿಷ್ಕಾರ, ಕೈಗಾರಿಕೆ, ಉದ್ಯೋಗಾವಕಾಶ ಸೇರಿ ಅನೇಕ ರೀತಿಯಲ್ಲಿ ಜಗತ್ತಿನ ಮುಂಚೂಣಿ ನಗರವಾಗಿರುವ ಬೆಂಗಳೂರಿನ ಭವ್ಯ ಪರಂಪರೆಯನ್ನು ಮುಂದುವರಿಸೋಣ ಎಂದು ಸಚಿವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago