ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್ಗೆ ವರದಿ ಸಲ್ಲಿಸಿವೆ.
ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಕೃಷ್ಣದೀಕ್ಷಿತ್ರಿದ್ದ ಪೀಠಕ್ಕೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದೆ. ಈ ವರದಿಯ ವಿಚಾರಣೆಯನ್ನು ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಶಿಫ್ಟ್ಗಳಲ್ಲಿ ಕೆಲಸ ಮಾಡುವುದರಿಂದ ದಟ್ಟಣೆ ಆಗುತ್ತಿಲ್ಲ, ಅವರ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.





