ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್ಗೆ ವರದಿ ಸಲ್ಲಿಸಿವೆ.
ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಕೃಷ್ಣದೀಕ್ಷಿತ್ರಿದ್ದ ಪೀಠಕ್ಕೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದೆ. ಈ ವರದಿಯ ವಿಚಾರಣೆಯನ್ನು ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಶಿಫ್ಟ್ಗಳಲ್ಲಿ ಕೆಲಸ ಮಾಡುವುದರಿಂದ ದಟ್ಟಣೆ ಆಗುತ್ತಿಲ್ಲ, ಅವರ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…