ರಾಜ್ಯ

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಅಸಾಧ್ಯ: ಸರ್ಕಾರದ ವರದಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್‌ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿವೆ.

ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಕೃಷ್ಣದೀಕ್ಷಿತ್‌ರಿದ್ದ ಪೀಠಕ್ಕೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದೆ. ಈ ವರದಿಯ ವಿಚಾರಣೆಯನ್ನು ಕೋರ್ಟ್‌ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಶಿಫ್ಟ್‌ಗಳಲ್ಲಿ ಕೆಲಸ ಮಾಡುವುದರಿಂದ ದಟ್ಟಣೆ ಆಗುತ್ತಿಲ್ಲ, ಅವರ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago