ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್ಗೆ ವರದಿ ಸಲ್ಲಿಸಿವೆ.
ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ. ಕೃಷ್ಣದೀಕ್ಷಿತ್ರಿದ್ದ ಪೀಠಕ್ಕೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ವರದಿ ಸಲ್ಲಿಸಿದೆ. ಈ ವರದಿಯ ವಿಚಾರಣೆಯನ್ನು ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಶಿಫ್ಟ್ಗಳಲ್ಲಿ ಕೆಲಸ ಮಾಡುವುದರಿಂದ ದಟ್ಟಣೆ ಆಗುತ್ತಿಲ್ಲ, ಅವರ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…