ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ನಿರಂತರವಾಗಿ ಹೋರಾಟ ನಡೆಸುತ್ತಿವೆ. ಮುಡಾ ಮತ್ತು
ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣಗಳ ಪಾರದರ್ಶಕ ತನಿಖೆಯ ದೃಷ್ಟಿಯಿಂದಾದರೂ ಸಿಎಂ ಹುದ್ದೆಗೆ ರಾಜೀನಾಮೆ ನೀಸಲೇಬೇಕು. ಅದನ್ನು ಬಿಟ್ಟು ಸಿದ್ದರಾಮಯ್ಯ ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಮೇಲೆ ಅರಾಜಕತೆ ಸೃಷ್ಟಿಯಾಗಿ ಅಭಿವೃದ್ಧಿ ಕಾರ್ಯಗಳೇ ಸ್ಥಗಿತವಾಗಿವೆ. ಇವೆಲ್ಲವಕ್ಕೂ ಮೂಲ ಕಾರಣ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಕಿಡಿಕಾರಿದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…