ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ನಿರಂತರವಾಗಿ ಹೋರಾಟ ನಡೆಸುತ್ತಿವೆ. ಮುಡಾ ಮತ್ತು
ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣಗಳ ಪಾರದರ್ಶಕ ತನಿಖೆಯ ದೃಷ್ಟಿಯಿಂದಾದರೂ ಸಿಎಂ ಹುದ್ದೆಗೆ ರಾಜೀನಾಮೆ ನೀಸಲೇಬೇಕು. ಅದನ್ನು ಬಿಟ್ಟು ಸಿದ್ದರಾಮಯ್ಯ ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಮೇಲೆ ಅರಾಜಕತೆ ಸೃಷ್ಟಿಯಾಗಿ ಅಭಿವೃದ್ಧಿ ಕಾರ್ಯಗಳೇ ಸ್ಥಗಿತವಾಗಿವೆ. ಇವೆಲ್ಲವಕ್ಕೂ ಮೂಲ ಕಾರಣ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಕಿಡಿಕಾರಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…