ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ. ಪಾರ್ಟಿ ಅವರನ್ನು ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದರು.
ಇನ್ನು ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ. ಸ್ಥಾನ ಬೇಕು ಎಂದು ಚೇರ್ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡಾ ಇಲ್ಲ. ಬೇರೆ ಯಾವುದೇ ಚಿಂತನೆಗಳು ಇಲ್ಲ. ಹಕ್ಕು ಎನ್ನುವ ಪ್ರಶ್ನೆಯೂ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಶಿವರಾತ್ರಿ ಹಬ್ಬದಂದು ಅಮಿತ್ ಶಾ ಭೇಟಿಯ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…