ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ. ಪಾರ್ಟಿ ಅವರನ್ನು ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದರು.
ಇನ್ನು ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ. ಸ್ಥಾನ ಬೇಕು ಎಂದು ಚೇರ್ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡಾ ಇಲ್ಲ. ಬೇರೆ ಯಾವುದೇ ಚಿಂತನೆಗಳು ಇಲ್ಲ. ಹಕ್ಕು ಎನ್ನುವ ಪ್ರಶ್ನೆಯೂ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಶಿವರಾತ್ರಿ ಹಬ್ಬದಂದು ಅಮಿತ್ ಶಾ ಭೇಟಿಯ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…