ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಇಂದು( ಜೂ.14) ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿ, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿದೆ. ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಎಲ್ಲಾ ಇಲಾಖೆಯಲ್ಲಿನ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.
ಜೆಡಿಎಸ್ನ್ನು ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರುವುದು ರಾಜಕೀಯವಲ್ಲ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಎಂದು ಹೇಳಿದರು.
ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯ ರಾಜಕಾರಣ ಯಾವ ರೀತಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆಯಾಗದಂತೆ ಕಾರ್ಖಾನೆಗಳು ಕೆಲಸ ಮಾಡುವಂತೆ ಮಾಡುತ್ತೇನೆ. ನಾಲ್ಕು ದಿನ ದೆಹಲಿಯಲ್ಲಿ ಕೆಲಸ ಮಾಡುವೆ. ಎರಡು ದಿನ ಕರ್ನಾಟಕದಲ್ಲಿರುತ್ತೇನೆ. ಅದರಲ್ಲೂ ಮಂಡ್ಯದಲ್ಲಿ ಇರುತ್ತೇನೆ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ನಮ ಸ್ವಯಂಕೃತ ಅಪರಾಧಗಳಿಂದ ಸೋತಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರಮೋದಿಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವರಾದ ಬಳಿಕ ನನ್ನ ಕರ್ಮಭೂಮಿಗೆ ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಅದರಲ್ಲೂ ವಿಶೇಷವಾಗಿ ರಾಮನಗರ ಮತ್ತು ಮಂಡ್ಯ ಜಿಲ್ಲೆ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಈ ಸಂದಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ರಮೇಶ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಮತ್ತಿತರರು ಇದ್ದರು.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…