ರಾಜ್ಯ

ಸಮಯ ವ್ಯರ್ಥ ಮಾಡುವುದಿಲ್ಲ, ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸುವೆ: ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಇಂದು( ಜೂ.14) ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿ, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿದೆ. ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಎಲ್ಲಾ ಇಲಾಖೆಯಲ್ಲಿನ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

ಜೆಡಿಎಸ್‍ನ್ನು ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರುವುದು ರಾಜಕೀಯವಲ್ಲ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಎಂದು ಹೇಳಿದರು.

ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯ ರಾಜಕಾರಣ ಯಾವ ರೀತಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆಯಾಗದಂತೆ ಕಾರ್ಖಾನೆಗಳು ಕೆಲಸ ಮಾಡುವಂತೆ ಮಾಡುತ್ತೇನೆ. ನಾಲ್ಕು ದಿನ ದೆಹಲಿಯಲ್ಲಿ ಕೆಲಸ ಮಾಡುವೆ. ಎರಡು ದಿನ ಕರ್ನಾಟಕದಲ್ಲಿರುತ್ತೇನೆ. ಅದರಲ್ಲೂ ಮಂಡ್ಯದಲ್ಲಿ ಇರುತ್ತೇನೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ನಮ ಸ್ವಯಂಕೃತ ಅಪರಾಧಗಳಿಂದ ಸೋತಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರಮೋದಿಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವರಾದ ಬಳಿಕ ನನ್ನ ಕರ್ಮಭೂಮಿಗೆ ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಅದರಲ್ಲೂ ವಿಶೇಷವಾಗಿ ರಾಮನಗರ ಮತ್ತು ಮಂಡ್ಯ ಜಿಲ್ಲೆ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಸಂದಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ರಮೇಶ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಮತ್ತಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

7 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

7 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

7 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

12 hours ago