Mysore
18
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌ ವಿಧಾನಸಭೆಯಲ್ಲಿ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.

ಇದನ್ನು ಓದಿ: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಟಿಪ್ಪು ಜಯಂತಿ ವಿಚಾರವಾಗಿ ಹಿಂದೆ ಸಾಕಷ್ಟು ಪರ ವಿರೋಧ ಹೇಳಿಕೆಗಳು ವ್ಯಕ್ತವಾಗಿದ್ದು, ಹಿಂಸಾಚಾರಕ್ಕೂ ಇದು ಕಾರಣವಾಗಿತ್ತು. ಇದೀಗ ಮತ್ತೆ ಆ ವಿಚಾರ ಮುನ್ನೆಲೆಗೆ ಬಂದಿದ್ದು, ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟಿಪ್ಪು ಜಯಂತಿ ಆದರೂ ಮಾಡ್ಕೊಳ್ಳಲಿ, ಲಾಡೆನ್‌ ಜಯಂತಿ ಆದರೂ ಮಾಡ್ಕೊಳ್ಳಲಿ. ಅವರ ಸರ್ಕಾರ ಇದೆ. ಜನರಿಗೆ ಇವರು ಯಾರ ಪರ ಎಂದು ಸ್ಪಷ್ಟವಾಗಿ ಗೊತ್ತಾಗುತ್ತೆ ಎಂದು ಹೇಳಿದರು.

Tags:
error: Content is protected !!