Mysore
17
broken clouds

Social Media

ಶುಕ್ರವಾರ, 30 ಜನವರಿ 2026
Light
Dark

ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ದೊಡ್ಡಬಳ್ಖಾಪುರ  :‌ ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ  ಪರ್ವೀಜ್‌ ಪಾಷ ಮೃತ ದುರ್ದೈವಿಯಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡಿಕೊಂಡಿದ್ದ ಪರ್ವೀಜ್‌ ಪಾಷ ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದುಕೊಂಡಿದ್ದ. ಇದೀಗ ಸಾಲಗಾರರ ಕಿರುಕುಳದಿಂದ ಬೇಸತ್ತು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ದೊಡ್ಡಬಳ್ಖಾಪುರ  ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!