ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ.
ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು, ಇಂದಿನಿಂದ 11 ದಿನದ ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ ಪವನ್ ಕಲ್ಯಾಣ್ ಅವರು, ತಿರುಪತಿ ಲಡ್ಡು ಅಮೃತಕ್ಕೆ ಸಮಾನ. ಈಗ ತಿರುಪತಿ ಲಡ್ಡು ಪ್ರಸಾದ ಅಶುದ್ಧವಾಗಿದೆ. ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.
ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. ಇಂದಿನಿಂದ 11 ದಿನಗಳ ಕಾಲ ದೀಕ್ಷೆ ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…