ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ.
ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು, ಇಂದಿನಿಂದ 11 ದಿನದ ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ ಪವನ್ ಕಲ್ಯಾಣ್ ಅವರು, ತಿರುಪತಿ ಲಡ್ಡು ಅಮೃತಕ್ಕೆ ಸಮಾನ. ಈಗ ತಿರುಪತಿ ಲಡ್ಡು ಪ್ರಸಾದ ಅಶುದ್ಧವಾಗಿದೆ. ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.
ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. ಇಂದಿನಿಂದ 11 ದಿನಗಳ ಕಾಲ ದೀಕ್ಷೆ ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…