ರಾಜ್ಯ

ತಿರುಪತಿ ಲಡ್ಡು ಪ್ರಕರಣ: ತಿರುಮಲ ದೇಗುಲದಲ್ಲಿ ನೆರವೇರಿದ ಶಾಂತಿ ಹೋಮ

ಹೈದರಾಬಾದ್‌: ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣದ ಕುರಿತು ಸಂಪ್ರೋಕ್ಷಣ ಕಾರ್ಯ ಭಾಗವಾಗಿ ಇಂದು ಶಾಂತಿ ಹೋಮವನ್ನು ತಿರುಪತಿ ತಿರುಮಲ ದೇವಸ್ಥಾನ ಏರ್ಪಡಿಸಿತ್ತು.

ಇಂದು ಆಂಧ್ರದ ತಿರುಪತಿ ದೇವಾಲಯದಲ್ಲಿ ಸಂಪ್ರೋಕ್ಷಣ ಶಾಂತಿ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು. ಹೋಮದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾರಾವ್‌, ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಅನೇಕ ಅರ್ಚಕರು ಭಾಗವಹಿಸಿದ್ದರು.

ದೇವಸ್ಥಾನದಲ್ಲಿ ನಾಲ್ಕು ಗಂಟೆಗಳ ಕಾಲ ಶಾಂತಿ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ.

ಆ ಆಚರಣೆಗಳಿಂದ ಕೆಟ್ಟದ್ದನ್ನು ನಿವಾರಿಸುತ್ತದೆ. ಸಾರ್ವಜನಿಕರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್‌ ಸ್ಥಾಪಿಸುತ್ತದೆ ಎಂದು ಟಿಟಿಡಿ ತಿಳಿಸಿದೆ.

 

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

1 hour ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago